ಕಲಬುರಗಿ ಸೆ.2:- ಬೆಳೆ ಹಾನಿಗೀಡಾದ ಕಲಬುರಗಿ ಜಿಲ್ಲೆಯ ರೈತರಿಗೆ ಶೀಘ್ರದಲ್ಲೇ ಬೆಳೆ ವಿಮೆ ಪರಿಹಾರ 18 ಕೋಟಿ ರೂಪಾಯಿ ಮಂಜೂರಾಗಲಿದೆ ಎಂದು ಗೃಹ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ. | 18 crore crop insurance quickly sanctioned |
ಖಾರಿಫ್ ಋತುಮಾನದಲ್ಲಿ ಮಳೆ ಕೊರತೆ ಕಾರಣ ಪ್ರಸಕ್ತ 2026-27ನೇ ಸಾಲಿನ ಬೆಳೆ ವಿಮೆ ಯೋಜನೆಯಡಿ ಅಲ್ಪಾವಧಿ ಬೆಳೆಗಳಾದ ಹೆಸರು, ಉದ್ದು ಹಾಗೂ ಸೋಯಾಬೀನ್ ಬೆಳೆಗಳಿಗೆ ಬೆಳೆ ವಿಮೆ ಮದ್ಯಂತರ ಪರಿಹಾರಕ್ಕಾಗಿ 18 ಕೋಟಿ ರೂ. (Mid Season Adversity) ಸರ್ಕಾರಕ್ಕೆ ಕಲಬುರಗಿ ಜಿಲ್ಲಾಡಳಿತದಿಂದ ವರದಿ ಸಲ್ಲಿಸಿದ್ದು, ಶೀಘ್ರದಲ್ಲಿಯೆ ಪರಿಹಾರ ಮಂಜೂರಾಗಲಿದೆ ಎಂದು ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
8 crore crop insurance quickly sanctioned |
ಕಲಬುರಗಿ ನಗರದ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರಿಂದ ಜಿಲ್ಲೆಯ 37,051 ರೈತರಿಗೆ ನೆರವಾಗಲಿದೆ. ಕಳೆದ ವರ್ಷವೂ ಸಹ ಜಿಲ್ಲಾಡಳಿತ ಹಾಗೂ ನಮ್ಮೆಲ್ಲರ ಪ್ರಯತ್ನದಿಂದ ನಮ್ಮ ಜಿಲ್ಲೆಯ ರೈತರಿಗೆ ದಾಖಲೆ ಪ್ರಮಾಣದಲ್ಲಿ ಪರಿಹಾರ ಬರಲು ಸಾಧ್ಯವಾಗಿದೆ ಎಂದರು.
Read this also : ಭೀಮಾ ನದಿ ನೀರಿನ ಹಕ್ಕು ಪಡೆಯಲು ಅಧಿಕಾರಿಗಳ ತಂಡ ರಚನೆ | Fight for Bhima Water
ಪ್ರಸ್ತುತ ಜೂನ್ ಮತ್ತು ಜುಲೈ ಮಾಹೆಯಲ್ಲಿ ಸತತ ಮೂರು ವಾರಗಳ ಕಾಲ ಮಳೆ ಇಲ್ಲದ ತಾಲೂಕುಗಳನ್ನು ಎನ್.ಡಿ.ಆರ್.ಎಫ್ ನಿಯಮಾವಳಿ ಪ್ರಕಾರ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ತಾಲೂಕು ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಬರ ಘೋಷಣೆಯ ತಾಲೂಕಿನಲ್ಲಿ ಕಲಬುರಗಿ ಜಿಲ್ಲೆಯ ಒಂದು ತಾಲೂಕು ಇಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಗಸ್ಟ್ ಮಾಹೆಯಲ್ಲಿ ಅಫಜಲಪೂರದಲ್ಲಿ ಶೇ.65, ಆಳಂದ ಶೇ.66, ಚಿಂಚೋಳಿ ಶೇ.61, ಕಲಬುರಗಿ ಶೇ.68, ಜೇವರ್ಗಿ ಶೇ.74, ಕಮಲಾಪೂರ ಶೇ.57, ಯಡ್ರಾಮಿ ಶೇ.69 ಹಾಗೂ ಶಹಾಬಾದ ಶೇ.62 ಮಳೆ ಕೊರತೆ ಇದೆ. ಮುಂದಿನ ದಿನದಲ್ಲಿ ಈ ತಾಲೂಕುಗಳನ್ನು ಎನ್.ಡಿ.ಅರ್.ಎಫ್ ನಿಯಮಾವಳಿ ಪ್ರಕಾರ ಮಾಸಿಕ ಶೇ.55-60ರಷ್ಟು ಮಳೆ ಕೊರತೆ ಪ್ರದೇಶವನ್ನು ಬರಪೀಡಿತ ತಾಲೂಕು ಎಂದು ಘೋಷಿಸಲಾಗುವುದು ಎಂದರು.
ಎನ್.ಡಿ.ಆರ್.ಎಫ್ ನಿಯಮ ಬದಲಾವಣೆ ತನ್ನಿ
ಬರ ಘೋಷಣೆಯ ಎನ್.ಡಿ.ಆರ್.ಎಫ್ ನಿಯಮಾವಳಿ 2020 ರಲ್ಲಿ ಎನ್.ಡಿ.ಎ. ಸರ್ಕಾರ ಪರಿಷ್ಕರಿಸಿದ್ದು, ಇದರಿಂದ ವಾಸ್ತವದಲ್ಲಿ ಬರಗಾಲವಿದ್ದರು ಬರ ಘೋಷಣೆ ಮಾಡಲು ನಮ್ಮಿಂದ ಸಾಧ್ಯವಾಗುತ್ತಿಲ್ಲ. ಬರ ಘೋಷಣೆ ರಾಜ್ಯಗಳಿಗೆ ಸ್ವಾತಂತ್ರ್ಯವಿಲ್ಲ. ಯು.ಪಿ.ಎ. ಅವಧಿಯಲ್ಲಿದ್ದ ಎನ್.ಡಿ.ಆರ್.ಎಫ್. ನಿಯಮಾವಳಿ ಜಾರಿಗೆ ತರಬೇಕೆಂಬುದು ನಮ್ಮ ಬೇಡಿಕೆಯಾಗಿದ್ದು, ಕೇಂದ್ರ ಸರ್ಕಾರ ಇದಕ್ಕೆ ಸ್ಪಂದಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಪೊಲೀಸ್ ಇಲಾಖೆಯಲ್ಲಿ ಸುಧಾರಣೆ
ಜನಸ್ನೇಹಿ ಪೊಲೀಸ್ ವ್ಯವಸ್ಥೆ ಜಾರಿಗೆ ತರುವ ನಿಟ್ಟಿನಲ್ಲಿ ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಸುಧಾರಣೆಗೆ ಪುನರ್ ರಚನೆ ಸಮಿತಿ ರಚಿಸಿದ್ದು, ಮುಂದಿನ ಒಂದು ತಿಂಗಳಲ್ಲಿ ಸಚಿವ ಸಂಪುಟ ಸಭೆ ಮುಂದೆ ಬರಲಿದೆ. ನಿನ್ನೆಯಷ್ಟೆ ರಾಜ್ಯದ ಬೆಸ್ಟ್ ಪಿ.ಸಿ. ಹೆಡ್ ಕಾನ್ಸ್ಟೇಬಲ್ ಅವರೊಂದಿಗೆ ಸಂವಾದ ನಡೆಸಿದ್ದೇನೆ. ಸಿ & ಆರ್ ಸಹ ತಿದ್ದುಪಡಿ ತರಲಾಗುತ್ತಿದೆ. ಡ್ರಗ್ಸ್ ಮಾಫಿಯಾಗೆ ಬ್ರೆಕ್, ಜೂಜಾಟ ತಡೆಯಲು ಯುವ ಜನರಮ್ನು ದುಶ್ಚಟದಿಂದ ರಕ್ಷಿಸಲು ನಶ ಮುಕ್ತ ಅಭಿಯಾನ, ಬೇಡ ಬ್ರೋ ಅಭಿಯಾನ ಹಾಕಿಕೊಂಡಿದ್ದೇವೆ ಎಂದು ಸಚಿವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ವಿಧಾನ ಒರಿಷತ್ ಶಾಸಕ ತಿಪ್ಪಣ್ಣಪ್ಪ ಕಮಕನೂರ, ಕಾಂಗ್ರೆಸ್ ಮುಖಂಡ ಸುಭಾಷ ರಾಠೋಡ ಇದ್ದರು







